ರಾಜ್ಯ

ಬಿಡದಿಯಲ್ಲಿ ವಿಮಾನ ನಿಲ್ದಾಣ ಮಾಡುತ್ತಿಲ್ಲ, ಗ್ರೇಟರ್‌ ಬಿಡದಿ ಲೇಔಟ್‌ ಆಗುತ್ತಿದೆ: ಎಂ.ಬಿ.ಪಾಟೀಲ್‌

ಬೆಂಗಳೂರು: ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಿಗೆ ಅಲ್ಲಿ ಗ್ರೇಟರ್‌ ಬಿಡದಿ ಲೇಔಟ್‌ ಮಾಡಲು ನಿವೇಶನ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.8) ಎರಡನೇ ವಿಮಾನ ‌ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಬಿಡದಿ ಸೂಕ್ತವಲ್ಲವೆಂದು ಈ ಹಿಂದೆ ಟಿಕ್ನಿಕಲ್ ವರದಿ ನೀಡಿದೆ. ಹಾಗಾಗಿ ಕನಕಪುರದ ಹಾರೋಹಳ್ಳಿ ಸಮೀಪದಲ್ಲಿ ಒಂದು ಸ್ಥಳ ನೋಡಲಾಗಿದೆ. ಅಲ್ಲದೇ ಕುಣಿಗಲ್ ರಸ್ತೆ ಬಳಿಯೂ ಒಂದು ಜಾಗ ನೋಡಿದ್ದೇವೆ. ಇವೆರಡೂ ವಿಧಾನಸೌಧದಿಂದ 50 ಕಿ.ಮೀ ದೂರ ಇವೆ ಎಂದರು.

ಟೆಕ್ನಿಕಲ್‌ ತಂಡದರು ಇಂದು ಮತ್ತು ನಾಳೆವರೆಗೂ ಜೊತೆಯಲ್ಲಿಯೇ ಇರುತ್ತಾರೆ. ಅವರೆಲ್ಲರೂ ಸ್ಥಳ ಪರಿಶೀಲನೆ ಮಾಡಿದ ಬಳಿಕ ದೆಹಲಿಗೆ ತೆರಳಿ ಆ ಸ್ಥಳಗಳ ಬಗ್ಗೆ ವರದಿ ನೀಡುತ್ತಾರೆ. ಇನ್ನೂ ದೆಹಲಿಯಿಂದ ನಮಗೆ ಸ್ಥಳ ವರದಿ ಬರಬೇಕು. ಆ ನಂತರ ನಾವು ಸಮಗ್ರ ಯೋಜನಾ ವರದಿ (DPR) ಮಾಡಬೇಕಾಗುತ್ತದೆ. ಅಲ್ಲದೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಯಾವ ಯಾವ ದೊಡ್ಡ ದೊಡ್ಡ ಕಂಪೆನಿಗಳು ಇವೆ ಎಂಬುದನ್ನು ನೋಡಬೇಕಾಗುತ್ತದೆ. ಇದಾದ ಮೇಲೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆದ ನಂತರ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

11 hours ago