ರಾಜ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯದಲ್ಲಿ ಶೀಘ್ರವೇ ಬಲಿಷ್ಠ ಕಾನೂನು ಜಾರಿ

ವಿಜಯಪುರ: ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿನ್ನೆಲೆಯಲ್ಲಿ ಇಂದು ಕೃಷ್ಣ ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಫೈನಾನ್ಸ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಲಿಷ್ಠ ಕಾನೂನು ತರುವಂತೆ ಸ್ಷಷ್ಟವಾಗಿ ಸೂಚಿಸಿದ್ದಾರೆ. ಹೀಗಾಗಿ ಫೈನಾನ್ಸ್‌ ಕಂಪೆನಿಗಳನ್ನು ಮಟ್ಟ ಹಾಕಲು ಮುಂದಿನ ದಿನಗಳಲ್ಲಿ ಬಲಿಷ್ಠ ಕಾನೂನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಹಲವು ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಕುರಿತು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದೊಂದು ಗಂಭೀರ ವಿಷಯವಾಗಿದೆ ಎಂದರು.

ಸಿಬಿಐ ಬಿಜೆಪಿಯ ಅಂಗ ಸಂಸ್ಥೆಯಾ?

ಇದೇ ಸಂದರ್ಭದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ವಿಚಾರವಾಗಿ ಬಿಜೆಪಿಯವರ ಟೀಕೆ ಬಗ್ಗೆ ಮಾತನಾಡಿದ ಅವರು, ಬಜೆಪಿಯವರಿಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ನಂಬಿಕೆ ಇಲ್ಲವೇ? ಸಿಬಿಐಗೆ ತನಿಖೆ ವಹಿಸಿ ಎಂದರೆ ಏನಾರ್ಥ? ಸಿಬಿಐ, ಬಿಜೆಪಿಯ ಅಂಗ ಸಂಸ್ಥೆಯಾ? ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago