ವಿಜಯಪುರ: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಜಯಪುರದಲ್ಲಿ ಇಂದು(ಜನವರಿ.25) ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದ ಹಿನ್ನೆಲೆಯಲ್ಲಿ ಇಂದು ಕೃಷ್ಣ ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಫೈನಾನ್ಸ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಲಿಷ್ಠ ಕಾನೂನು ತರುವಂತೆ ಸ್ಷಷ್ಟವಾಗಿ ಸೂಚಿಸಿದ್ದಾರೆ. ಹೀಗಾಗಿ ಫೈನಾನ್ಸ್ ಕಂಪೆನಿಗಳನ್ನು ಮಟ್ಟ ಹಾಕಲು ಮುಂದಿನ ದಿನಗಳಲ್ಲಿ ಬಲಿಷ್ಠ ಕಾನೂನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹಲವು ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಕುರಿತು ಹಗುರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದೊಂದು ಗಂಭೀರ ವಿಷಯವಾಗಿದೆ ಎಂದರು.
ಸಿಬಿಐ ಬಿಜೆಪಿಯ ಅಂಗ ಸಂಸ್ಥೆಯಾ?
ಇದೇ ಸಂದರ್ಭದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ವಿಚಾರವಾಗಿ ಬಿಜೆಪಿಯವರ ಟೀಕೆ ಬಗ್ಗೆ ಮಾತನಾಡಿದ ಅವರು, ಬಜೆಪಿಯವರಿಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ನಂಬಿಕೆ ಇಲ್ಲವೇ? ಸಿಬಿಐಗೆ ತನಿಖೆ ವಹಿಸಿ ಎಂದರೆ ಏನಾರ್ಥ? ಸಿಬಿಐ, ಬಿಜೆಪಿಯ ಅಂಗ ಸಂಸ್ಥೆಯಾ? ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…