ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ವರ್ಷದ ನಂತರ ಬಿಟ್ಟುಕೊಡುವ ಬಗ್ಗೆ ಆಗಿರುವ ಒಪ್ಪಂದವೂ ಸಹ ತಿಳಿದಿಲ್ಲ. ನನಗೆ ಗೊತ್ತಿರುವ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರೇ ಇನ್ನುಳಿದ ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಡಿನ್ನರ್ ಪಾರ್ಟಿ ಕುರಿತಂತೆ ಮಾತನಾಡಿದ ಅವರು, ನಮ್ಮ ಪಕ್ದದ ಶಾಸಕರು ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿದೆ. ಹೀಗಾಗಿ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…