ರಾಜ್ಯ

ಅಶೋಕ್‌ಗೆ ಮೈತ್ರಿ ನಾಯಕರನ್ನು ಪ್ರಶ್ನಿಸಲು ಸಾಧ್ಯವೇ : ಕಾಂಗ್ರೆಸ್‌

ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಟೀಕಿಸಲು ಸಾಧ್ಯವೇ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ಸಂಶೋಧನ ವಿಭಾಗದ ಸಂಚಾಲಕ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಂಶೋಧನ ವಿಭಾಗದ ಅಧ್ಯಕ್ಷ ಡಾ.ಎಂ ನಾಗರಾಜ್ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪದೇ ಪದೇ ಮಲ್ಲಿಕಾರ್ಜುನ ಖರ್ಗೆ ಒಬ್ಬ ಅಚಾನಕ್ಕಾಗಿ ಕಾಂಗ್ರೆಸ್ ಪಕ್ಷದ ರಾಷ್ಟೀಯ ಅಧ್ಯಕ್ಷರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರ ಮಟ್ಟದಲ್ಲಿರುವ ಒಬ್ಬ ದಲಿತ ನಾಯಕ ರಾಷ್ಟೀಯ ಪಕ್ಷದ ಅಧ್ಯಕ್ಷರಾಗುವುದು ಸಾಮಾನ್ಯ ವಿಷಯವಲ್ಲ, ಆದರೆ ಆರ್ ಅಶೋಕ್ ಅವರು ಖರ್ಗೆ ಅವರ ಹಿರಿಮೆ ಹಾಗೂ ರಾಜಕೀಯ ಅನುಭವವನ್ನು ತಿಳಿಯದೆ ಅವರ ಬಗ್ಗೆ ವ್ಯಂಗ್ಯದ ಮಾತುಗಳನಾಡುತ್ತಾರೆ.

ಆರ್ ಅಶೋಕ್ ಅವರಿಗೆ ಧೈರ್ಯವಿದ್ದರೆ ಅವರದೇ ಮೈತ್ರಿ ಪಕ್ಷದ ರಾಜ್ಯದ ಇಬ್ಬರು ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಅಚಾನಕ್ಕಾಗಿ ಪ್ರಧಾನಿಯಾದರು ಹಾಗೂ ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಅವರು ಸಹ ಪೂರ್ಣ ಬಹುಮತ ಪಡೆಯದೇ ಅಚಾನಕ್ಕಾಗಿ ಎರಡು ಬಾರೀ ರಾಜ್ಯದ ಮುಖ್ಯಮಂತ್ರಿಯಾಗಿದ್ದರು, ಈಗೀರುವಾಗ ಈ ಇಬ್ಬರು ನಾಯಕರನ್ನು ಆರ್ ಅಶೋಕ್ ಅಚಾನಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿಯಾದವರು ಎಂದು ಹೇಳುವ ಧೈರ್ಯ ತೋರಲಿ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶೋಷಿತ ಸಮುದಾಯದಿಂದ ಎದ್ದು ಬಂದ ನಾಯಕ, ಅಸ್ಪೃಶ್ಯತೆ ನಡುವೆ ದೇಶದ ರಾಜಕಾರಣದಲ್ಲಿ ಒಂದು ರಾಷ್ಟೀಯ ಪಕ್ಷದ ನಾಯಕರಾಗುವುದು ಸಾಮಾನ್ಯದ ಮಾತಲ್ಲ, ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಪದೇ ಪದೇ ಟೀಕಿಸುವುದನ್ನು ಆರ್ ಅಶೋಕ್ ನಿಲ್ಲಿಸಬೇಕು, ಇಲ್ಲವಾದರೆ ನಮ್ಮ ಸಮುದಾಯದಿಂದ ರಾಜ್ಯದ್ಯಂತ ಆರ್ ಅಶೋಕ್ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಾ ಎಂ ನಾಗರಾಜ್ ಎಚ್ಚರಿಕೆಯನ್ನು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

12 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

12 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

12 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

13 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

13 hours ago