BJP tweet about Congress corruption
ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಟೀಕಿಸಲು ಸಾಧ್ಯವೇ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ಸಂಶೋಧನ ವಿಭಾಗದ ಸಂಚಾಲಕ ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಂಶೋಧನ ವಿಭಾಗದ ಅಧ್ಯಕ್ಷ ಡಾ.ಎಂ ನಾಗರಾಜ್ ಪ್ರಶ್ನಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪದೇ ಪದೇ ಮಲ್ಲಿಕಾರ್ಜುನ ಖರ್ಗೆ ಒಬ್ಬ ಅಚಾನಕ್ಕಾಗಿ ಕಾಂಗ್ರೆಸ್ ಪಕ್ಷದ ರಾಷ್ಟೀಯ ಅಧ್ಯಕ್ಷರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರ ಮಟ್ಟದಲ್ಲಿರುವ ಒಬ್ಬ ದಲಿತ ನಾಯಕ ರಾಷ್ಟೀಯ ಪಕ್ಷದ ಅಧ್ಯಕ್ಷರಾಗುವುದು ಸಾಮಾನ್ಯ ವಿಷಯವಲ್ಲ, ಆದರೆ ಆರ್ ಅಶೋಕ್ ಅವರು ಖರ್ಗೆ ಅವರ ಹಿರಿಮೆ ಹಾಗೂ ರಾಜಕೀಯ ಅನುಭವವನ್ನು ತಿಳಿಯದೆ ಅವರ ಬಗ್ಗೆ ವ್ಯಂಗ್ಯದ ಮಾತುಗಳನಾಡುತ್ತಾರೆ.
ಆರ್ ಅಶೋಕ್ ಅವರಿಗೆ ಧೈರ್ಯವಿದ್ದರೆ ಅವರದೇ ಮೈತ್ರಿ ಪಕ್ಷದ ರಾಜ್ಯದ ಇಬ್ಬರು ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಅಚಾನಕ್ಕಾಗಿ ಪ್ರಧಾನಿಯಾದರು ಹಾಗೂ ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಅವರು ಸಹ ಪೂರ್ಣ ಬಹುಮತ ಪಡೆಯದೇ ಅಚಾನಕ್ಕಾಗಿ ಎರಡು ಬಾರೀ ರಾಜ್ಯದ ಮುಖ್ಯಮಂತ್ರಿಯಾಗಿದ್ದರು, ಈಗೀರುವಾಗ ಈ ಇಬ್ಬರು ನಾಯಕರನ್ನು ಆರ್ ಅಶೋಕ್ ಅಚಾನಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿಯಾದವರು ಎಂದು ಹೇಳುವ ಧೈರ್ಯ ತೋರಲಿ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶೋಷಿತ ಸಮುದಾಯದಿಂದ ಎದ್ದು ಬಂದ ನಾಯಕ, ಅಸ್ಪೃಶ್ಯತೆ ನಡುವೆ ದೇಶದ ರಾಜಕಾರಣದಲ್ಲಿ ಒಂದು ರಾಷ್ಟೀಯ ಪಕ್ಷದ ನಾಯಕರಾಗುವುದು ಸಾಮಾನ್ಯದ ಮಾತಲ್ಲ, ಹೀಗಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಪದೇ ಪದೇ ಟೀಕಿಸುವುದನ್ನು ಆರ್ ಅಶೋಕ್ ನಿಲ್ಲಿಸಬೇಕು, ಇಲ್ಲವಾದರೆ ನಮ್ಮ ಸಮುದಾಯದಿಂದ ರಾಜ್ಯದ್ಯಂತ ಆರ್ ಅಶೋಕ್ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಾ ಎಂ ನಾಗರಾಜ್ ಎಚ್ಚರಿಕೆಯನ್ನು ನೀಡಿದ್ದಾರೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…