ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿನ್ನೆ ಮುಕ್ತಾಯವಾಗಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಅವರು ಆಯ್ಕೆಯಾಗಿದ್ದಾರೆ.
ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್ ರಾಜು ಆರ್ ಅವರನ್ನು ಮಣಿಸಿದ್ದಾರೆ. ಎಂ.ನರಸಿಂಹಲು ಅವರು ಆಯ್ಕೆಯಾಗುವ ಮೂಲಕ ಸಾ.ರಾ.ಗೋವಿಂದು ಬಣಕ್ಕೆ ಮತ್ತೆ ಗೆಲುವು ಸಿಕ್ಕಂತಾಗಿದೆ.
ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು.
ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಂ.ನರಸಿಂಹಲು ಅವರು ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.
ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್ ಆಯ್ಕೆಗೊಂಡರು.
ಇನ್ನು ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ, ನಿರ್ಮಾಪಕ ವಲಯದಿಂದ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಎಂ.ಎನ್.ಕುಮಾರ್ ಅವರು ಆಯ್ಕೆಗೊಂಡಿದ್ದಾರೆ.
ನಿನ್ನೆ ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ.
ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಇದರಲ್ಲಿ ಪ್ರಮುಖವಾಗಿ ಸಾ.ರಾ.ಗೋವಿಂದು ಬಣ ಹಾಗೂ ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು.
ಅಂತಿಮವಾಗಿ ಸಾ.ರಾ.ಗೋವಿಂದು ಬಣಕ್ಕೆ ಜಯ ದೊರೆತಿದ್ದು, ಕುಟುಂಬದಲ್ಲೂ ಕೂಡ ಸಂತಸ ಮನೆಮಾಡಿದೆ.
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…