ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿನ್ನೆ ಮುಕ್ತಾಯವಾಗಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಅವರು ಆಯ್ಕೆಯಾಗಿದ್ದಾರೆ.
ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್ ರಾಜು ಆರ್ ಅವರನ್ನು ಮಣಿಸಿದ್ದಾರೆ. ಎಂ.ನರಸಿಂಹಲು ಅವರು ಆಯ್ಕೆಯಾಗುವ ಮೂಲಕ ಸಾ.ರಾ.ಗೋವಿಂದು ಬಣಕ್ಕೆ ಮತ್ತೆ ಗೆಲುವು ಸಿಕ್ಕಂತಾಗಿದೆ.
ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು.
ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಂ.ನರಸಿಂಹಲು ಅವರು ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.
ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್ ಆಯ್ಕೆಗೊಂಡರು.
ಇನ್ನು ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ, ನಿರ್ಮಾಪಕ ವಲಯದಿಂದ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಎಂ.ಎನ್.ಕುಮಾರ್ ಅವರು ಆಯ್ಕೆಗೊಂಡಿದ್ದಾರೆ.
ನಿನ್ನೆ ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ.
ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಇದರಲ್ಲಿ ಪ್ರಮುಖವಾಗಿ ಸಾ.ರಾ.ಗೋವಿಂದು ಬಣ ಹಾಗೂ ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು.
ಅಂತಿಮವಾಗಿ ಸಾ.ರಾ.ಗೋವಿಂದು ಬಣಕ್ಕೆ ಜಯ ದೊರೆತಿದ್ದು, ಕುಟುಂಬದಲ್ಲೂ ಕೂಡ ಸಂತಸ ಮನೆಮಾಡಿದೆ.
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…
ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗ…