ರಾಜ್ಯ

ಕರ್ನಾಟಕ ಫಿಲ್ಮ್‌ ಚೇಂಬರ್ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಿನ್ನೆ ಮುಕ್ತಾಯವಾಗಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಅವರು ಆಯ್ಕೆಯಾಗಿದ್ದಾರೆ.

ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್‌ ರಾಜು ಆರ್‌ ಅವರನ್ನು ಮಣಿಸಿದ್ದಾರೆ. ಎಂ.ನರಸಿಂಹಲು ಅವರು ಆಯ್ಕೆಯಾಗುವ ಮೂಲಕ ಸಾ.ರಾ.ಗೋವಿಂದು ಬಣಕ್ಕೆ ಮತ್ತೆ ಗೆಲುವು ಸಿಕ್ಕಂತಾಗಿದೆ.

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು.

ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಂ.ನರಸಿಂಹಲು ಅವರು ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.

ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್‌ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್‌ ಆಯ್ಕೆಗೊಂಡರು.

ಇನ್ನು ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್‌ ಚಿತ್ರಮಂದಿರದ ಮಾಲೀಕ ಕುಶಾಲ್‌ ಎಲ್.ಸಿ, ನಿರ್ಮಾಪಕ ವಲಯದಿಂದ ಪ್ರವೀಣ್‌ ಕುಮಾರ್‌, ವಿತರಕ ವಲಯದಿಂದ ಎಂ.ಎನ್.ಕುಮಾರ್‌ ಅವರು ಆಯ್ಕೆಗೊಂಡಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ.

ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಇದರಲ್ಲಿ ಪ್ರಮುಖವಾಗಿ ಸಾ.ರಾ.ಗೋವಿಂದು ಬಣ ಹಾಗೂ ಭಾಮಾ ಹರೀಶ್‌ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು.

ಅಂತಿಮವಾಗಿ ಸಾ.ರಾ.ಗೋವಿಂದು ಬಣಕ್ಕೆ ಜಯ ದೊರೆತಿದ್ದು, ಕುಟುಂಬದಲ್ಲೂ ಕೂಡ ಸಂತಸ ಮನೆಮಾಡಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

34 mins ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

1 hour ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

3 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

3 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

4 hours ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

5 hours ago