ರಾಜ್ಯ

ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

ಬೆಂಗಳೂರು: ರಾಜ್ಯದ ಪ್ರಭಾರ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ಕಳೆದ ಏಪ್ರಿಲ್.‌30ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿತ್ತು.

ಇಂದು ಅಲೋಕ್‌ ಮೋಹನ್‌ ಅವರಿಂದ ತೆರವಾದ ಸ್ಥಾನಕ್ಕೆ ಡಾ.ಎಂ.ಎ.ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.

1966ರ ಜೂನ್‌.22ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಸಲೀಂ ಅವರು, 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್‌ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದರು. 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್‌ ಮ್ಯಾನೇಜ್ಮೆಂಟ್‌ ವಿಷಯದಲ್ಲಿ ಡಾಕ್ಟರೇಟ್‌ ಪದವಿ ಪಡೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

18 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

59 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

1 hour ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago