ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ.
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಶಾಖದ ತೀವ್ರತೆ ಹೆಚ್ಚಾಗಲಿದೆ. ಮಲೆನಾಡು, ಕರಾವಳಿಯಲ್ಲೂ ಬಿಸಿಲಿನ ಝಳ ಅಧಿಕವಾಗಲಿದೆ.
ಕಲಬುರ್ಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ನಿಂದ 37 ಡಿಗ್ರಿ ಸೆಲ್ಸಿಯಸ್ವರೆಗೂ ಏರಿಕೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಿತಕರ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಚರ್ಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಎಳನೀರು ಸೇರಿದಂತೆ ಹೆಚ್ಚು ಹೆಚ್ಚು ತಂಪು ಪಾನೀಯಗಳನ್ನು ಕುಡಿಯಬೇಕು ಎಂದು ಸಲಹೆ ನೀಡಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…