ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ.
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಶಾಖದ ತೀವ್ರತೆ ಹೆಚ್ಚಾಗಲಿದೆ. ಮಲೆನಾಡು, ಕರಾವಳಿಯಲ್ಲೂ ಬಿಸಿಲಿನ ಝಳ ಅಧಿಕವಾಗಲಿದೆ.
ಕಲಬುರ್ಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ನಿಂದ 37 ಡಿಗ್ರಿ ಸೆಲ್ಸಿಯಸ್ವರೆಗೂ ಏರಿಕೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಿತಕರ ವಾತಾವರಣವಿರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಚರ್ಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಎಳನೀರು ಸೇರಿದಂತೆ ಹೆಚ್ಚು ಹೆಚ್ಚು ತಂಪು ಪಾನೀಯಗಳನ್ನು ಕುಡಿಯಬೇಕು ಎಂದು ಸಲಹೆ ನೀಡಿದೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…