Mysore
19
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಮದ್ದೂರು ಗಲಾಟೆ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಾಟೆ ಮಾಡಿದವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಕೆಲವು ಕಡೆ ಸಣ್ಣ-ಪುಟ್ಟ ಘಟನೆಗಳಾಗಿವೆ. ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲವೂ ನಿಯಂತ್ರಣದಲ್ಲಿದೆ.

ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ. ಬಿಜೆಪಿಯವರು ಆರೋಪ ಮಾಡುತ್ತಾರೆ. ಅದೇ ಅವರಿಗೆ ಕೆಲಸ ಎಂದು ಹೇಳಿದ್ದಾರೆ.

Tags:
error: Content is protected !!