ರಾಜ್ಯ

ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ಪ್ರಕರಣ ನಡೆದಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ ಎಂದು ಹೇಳಿದರು.

ಇನ್ನು ಮದ್ದೂರು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯಕ್ಕೆ ತೆರಳುತ್ತಿದ್ದಾರೆ. ಅವರು ವರದಿ ನೀಡಿದ ಬಳಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 min ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

17 mins ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

41 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

3 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago