madenoor manu
ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್ ಸಿಡಿಸಿದ್ದಾರೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಹೀಗಿರುವಾಗ ಎಫ್ಐಆರ್ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಎಂದು ಹೇಳಿಕೊಡ್ತಿದ್ದಾರೆ ಎಂದು ಅವಳೇ ಹೇಳಿದ್ದಳು. ಯಾರ್ಯಾರು ಹೇಳಿಕೊಡ್ತಿದ್ದಾರೆ ಎಂದು ಕೂಡ ನನ್ನ ಬಳಿ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ ಎಂದು ವಿಡಿಯೋದಲ್ಲಿ ಮಡೆನೂರು ಮನು ಹೇಳಿದ್ದಾರೆ.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…