madenoor manu
ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್ ಸಿಡಿಸಿದ್ದಾರೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಹೀಗಿರುವಾಗ ಎಫ್ಐಆರ್ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಎಂದು ಹೇಳಿಕೊಡ್ತಿದ್ದಾರೆ ಎಂದು ಅವಳೇ ಹೇಳಿದ್ದಳು. ಯಾರ್ಯಾರು ಹೇಳಿಕೊಡ್ತಿದ್ದಾರೆ ಎಂದು ಕೂಡ ನನ್ನ ಬಳಿ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ ಎಂದು ವಿಡಿಯೋದಲ್ಲಿ ಮಡೆನೂರು ಮನು ಹೇಳಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…