ರಾಜ್ಯ

ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಹೊಸ ಬಾಂಬ್‌

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್‌ ಸಿಡಿಸಿದ್ದಾರೆ.

ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ರಿಲೀಸ್‌ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಎಂದು ಹೇಳಿಕೊಡ್ತಿದ್ದಾರೆ ಎಂದು ಅವಳೇ ಹೇಳಿದ್ದಳು. ಯಾರ್ಯಾರು ಹೇಳಿಕೊಡ್ತಿದ್ದಾರೆ ಎಂದು ಕೂಡ ನನ್ನ ಬಳಿ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ ಎಂದು ವಿಡಿಯೋದಲ್ಲಿ ಮಡೆನೂರು ಮನು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago