v somanna
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು ಪಡೆದು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡಪರ ಹೋರಾಟಕ್ಕೊಂದು ಸಂವೇದನಾ ಪರಂಪರೆ ಮತ್ತು ಇತಿಹಾಸವಿದೆ. ಈ ಇತಿಹಾಸದ ಅರಿವಿರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂತಹ ಕನ್ನಡ ವಿರೋಧಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದು ಕನ್ನಡದ ಕಣ್ಮಣಿ, ವರನಟ ಡಾ. ರಾಜಕುಮಾರ್ ನೇತೃತ್ವದಲ್ಲಿ ಹಾಗೂ ಅನೇಕ ಕನ್ನಡದ ಕಟ್ಟಾಳುಗಳ ಆಸರೆಯಲ್ಲಿ ನಡೆದ ಐತಿಹಾಸಿಕ ಗೋಕಾಕ್ ಚಳವಳಿಯ ಕನ್ನಡ ಪರ ಆಂದೋಲನದ ಪ್ರತಿಫಲವಾಗಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಇಂತಹ ಹೋರಾಟದ ಹಿನ್ನೆಲೆಯಲ್ಲಿ ಜಾರಿಗೆ ಬಂದ ಕನ್ನಡದ 125 ಅಂಕಗಳನ್ನು ಇತಿಹಾಸದ ಪ್ರಜ್ಞೆಯಿಲ್ಲದೆ 100 ಅಂಕಗಳಿಗೆ ಇಳಿಸುವ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…