v somanna
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು ಪಡೆದು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಕನ್ನಡಪರ ಹೋರಾಟಕ್ಕೊಂದು ಸಂವೇದನಾ ಪರಂಪರೆ ಮತ್ತು ಇತಿಹಾಸವಿದೆ. ಈ ಇತಿಹಾಸದ ಅರಿವಿರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂತಹ ಕನ್ನಡ ವಿರೋಧಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದು ಕನ್ನಡದ ಕಣ್ಮಣಿ, ವರನಟ ಡಾ. ರಾಜಕುಮಾರ್ ನೇತೃತ್ವದಲ್ಲಿ ಹಾಗೂ ಅನೇಕ ಕನ್ನಡದ ಕಟ್ಟಾಳುಗಳ ಆಸರೆಯಲ್ಲಿ ನಡೆದ ಐತಿಹಾಸಿಕ ಗೋಕಾಕ್ ಚಳವಳಿಯ ಕನ್ನಡ ಪರ ಆಂದೋಲನದ ಪ್ರತಿಫಲವಾಗಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಇಂತಹ ಹೋರಾಟದ ಹಿನ್ನೆಲೆಯಲ್ಲಿ ಜಾರಿಗೆ ಬಂದ ಕನ್ನಡದ 125 ಅಂಕಗಳನ್ನು ಇತಿಹಾಸದ ಪ್ರಜ್ಞೆಯಿಲ್ಲದೆ 100 ಅಂಕಗಳಿಗೆ ಇಳಿಸುವ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…