ರಾಜ್ಯ

ಮಧು ಬಂಗಾರಪ್ಪರಿಂದ ಕನ್ನಡ ವಿರೋಧಿ ನೀತಿ: ಕೇಂದ್ರ ಸಚಿವ ವಿ.ಸೋಮಣ್ಣ ಆಕ್ರೋಶ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳ ಬದಲು 100 ಅಂಕಗಳಿಗೆ ಇಳಿಸುವ ನಿರ್ಧಾರ ತೆಗೆದುಕೊಂಡಿರುವುದನ್ನು ಖಂಡಿಸಿರುವ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು, ತಕ್ಷಣ ಈ ನಿರ್ಧಾರವನ್ನು ವಾಪಸ್ಸು ಪಡೆದು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡಪರ ಹೋರಾಟಕ್ಕೊಂದು ಸಂವೇದನಾ ಪರಂಪರೆ ಮತ್ತು ಇತಿಹಾಸವಿದೆ. ಈ ಇತಿಹಾಸದ ಅರಿವಿರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂತಹ ಕನ್ನಡ ವಿರೋಧಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂದು ಕನ್ನಡದ ಕಣ್ಮಣಿ, ವರನಟ ಡಾ. ರಾಜಕುಮಾರ್ ನೇತೃತ್ವದಲ್ಲಿ ಹಾಗೂ ಅನೇಕ ಕನ್ನಡದ ಕಟ್ಟಾಳುಗಳ ಆಸರೆಯಲ್ಲಿ ನಡೆದ ಐತಿಹಾಸಿಕ ಗೋಕಾಕ್ ಚಳವಳಿಯ ಕನ್ನಡ ಪರ ಆಂದೋಲನದ ಪ್ರತಿಫಲವಾಗಿ ಕನ್ನಡ ಸೇರಿದಂತೆ ಪ್ರಥಮ ಭಾಷೆಗಳಿಗೆ 125 ಅಂಕಗಳನ್ನು ನಿಗದಿಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.‌

ಇಂತಹ ಹೋರಾಟದ ಹಿನ್ನೆಲೆಯಲ್ಲಿ ಜಾರಿಗೆ ಬಂದ ಕನ್ನಡದ 125 ಅಂಕಗಳನ್ನು ಇತಿಹಾಸದ ಪ್ರಜ್ಞೆಯಿಲ್ಲದೆ 100 ಅಂಕಗಳಿಗೆ ಇಳಿಸುವ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

10 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

14 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

14 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

14 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

17 hours ago