ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ತನ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್ನೋಟ್ ಪೋಸ್ಟ್ ಮಾಡಿರುವ ಅವರು, ರಾಜಕೀಯ ಪ್ರೇರಿತ ಎಫ್ಐಆರ್ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣದ ಮಾಹಿತಿ ಪಡೆದಿದ್ದಾರೆ.
ಘಟನೆಗೆ ಕಾರಣ: ವಿನಯ್ ಸೋಮಣ್ಣ ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ವೀರ್ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಣ್ಣ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ತೀವ್ರ ಮನನೊಂದಿದ್ದ ವಿನಯ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…