ರಾಜ್ಯ

ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ಜನವರಿ.1ರಿಂದ ಮ್ಯಾಗಿ ಬೆಲೆ ದುಬಾರಿಯಾಗೋದು ಪಕ್ಕಾ

ಬೆಂಗಳೂರು: ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ ಎದುರಾಗಿದ್ದು, ಲಕ್ಷಾಂತರ ಭಾರತೀಯರು ಇಷ್ಟಪಡುವ ಐಕಾನಿಕ್‌ ಮ್ಯಾಗಿ ಶೀಘ್ರದಲ್ಲೇ ದುಬಾರಿಯಾಗಲಿದೆ.

ಈ ನಿರೀಕ್ಷಿತ ಬೆಲೆಯ ಏರಿಕೆಯು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳಲ್ಲಿನ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದೆ.

ಸ್ವಿಟ್ಜರ್ಲೆಂಡ್‌ ತನ್ನ 1994ರ ಡಬಲ್‌ ಟ್ಯಾಕ್ಸೇಶನ್‌ ಅವಾಯ್ಡನ್ಸ್‌ ಅಗ್ರಿಮೆಂಟ್‌ ಅಡಿಯಲ್ಲಿ ಭಾರತದೊಂದಿಗೆ ಜನವರಿ.1,2025ರಿಂದ ಜಾರಿಗೆ ಬರುವಂತೆ ಮೋಸ್ಟ್‌ ಫೇವರ್ಡ್‌ ನೇಷನ್‌ ಷರತ್ತನ್ನು ಅಮಾನತುಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರವು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ನೆಸ್ಲೆ ಮ್ಯಾಗಿ ಸೇರಿದಂತೆ ಸ್ವಿಸ್‌ ಕಂಪನಿಗಳಿಗೆ ವೆಚ್ಚವನ್ನು ಹೆಚ್ಚಿಸಲು ಕಾರಣವಾಗಬಹುದು.

ಈ ವಿವಾದದ ಮೂಲ 2023ರ ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿದೆ. ಇದು DTAAನಲ್ಲಿರುವ MFN ಷರತ್ತು ಸ್ವಯಂಚಾಲಿತವಾಗಿ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇತರ ರಾಷ್ಟ್ರಗಳೊಂದಿಗೆ ಭಾರತದ ಒಪ್ಪಂದಗಳ ಆಧಾರದ ಮೇಲೆ 5% ಕಡಿಮೆ ತೆರಿಗೆ ದರವನ್ನು ಕೋರಿದ ನೆಸ್ಲೆ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕಾರ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಜನವರಿಯಿಂದಲೇ ಮ್ಯಾಗಿ ನ್ಯೂಡಲ್ಸ್‌ ಮತ್ತು ಇತರೆ ನೆಸ್ಲೆ ಉತ್ಪನ್ನಗಳು ಬೆಲೆಯನ್ನು ಹೆಚ್ಚಿಸುತ್ತವೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

4 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

35 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

3 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

3 hours ago