ರಾಜ್ಯ

ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ಜನವರಿ.1ರಿಂದ ಮ್ಯಾಗಿ ಬೆಲೆ ದುಬಾರಿಯಾಗೋದು ಪಕ್ಕಾ

ಬೆಂಗಳೂರು: ಆಹಾರ ಪ್ರಿಯರಿಗೆ ಶಾಕಿಂಗ್‌ ಸುದ್ದಿ ಎದುರಾಗಿದ್ದು, ಲಕ್ಷಾಂತರ ಭಾರತೀಯರು ಇಷ್ಟಪಡುವ ಐಕಾನಿಕ್‌ ಮ್ಯಾಗಿ ಶೀಘ್ರದಲ್ಲೇ ದುಬಾರಿಯಾಗಲಿದೆ.

ಈ ನಿರೀಕ್ಷಿತ ಬೆಲೆಯ ಏರಿಕೆಯು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳಲ್ಲಿನ ಮಹತ್ವದ ಬೆಳವಣಿಗೆಗೆ ಸಂಬಂಧಿಸಿದೆ.

ಸ್ವಿಟ್ಜರ್ಲೆಂಡ್‌ ತನ್ನ 1994ರ ಡಬಲ್‌ ಟ್ಯಾಕ್ಸೇಶನ್‌ ಅವಾಯ್ಡನ್ಸ್‌ ಅಗ್ರಿಮೆಂಟ್‌ ಅಡಿಯಲ್ಲಿ ಭಾರತದೊಂದಿಗೆ ಜನವರಿ.1,2025ರಿಂದ ಜಾರಿಗೆ ಬರುವಂತೆ ಮೋಸ್ಟ್‌ ಫೇವರ್ಡ್‌ ನೇಷನ್‌ ಷರತ್ತನ್ನು ಅಮಾನತುಗೊಳಿಸಲು ನಿರ್ಧರಿಸಿದೆ.

ಈ ನಿರ್ಧಾರವು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ನೆಸ್ಲೆ ಮ್ಯಾಗಿ ಸೇರಿದಂತೆ ಸ್ವಿಸ್‌ ಕಂಪನಿಗಳಿಗೆ ವೆಚ್ಚವನ್ನು ಹೆಚ್ಚಿಸಲು ಕಾರಣವಾಗಬಹುದು.

ಈ ವಿವಾದದ ಮೂಲ 2023ರ ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿದೆ. ಇದು DTAAನಲ್ಲಿರುವ MFN ಷರತ್ತು ಸ್ವಯಂಚಾಲಿತವಾಗಿ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇತರ ರಾಷ್ಟ್ರಗಳೊಂದಿಗೆ ಭಾರತದ ಒಪ್ಪಂದಗಳ ಆಧಾರದ ಮೇಲೆ 5% ಕಡಿಮೆ ತೆರಿಗೆ ದರವನ್ನು ಕೋರಿದ ನೆಸ್ಲೆ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕಾರ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಜನವರಿಯಿಂದಲೇ ಮ್ಯಾಗಿ ನ್ಯೂಡಲ್ಸ್‌ ಮತ್ತು ಇತರೆ ನೆಸ್ಲೆ ಉತ್ಪನ್ನಗಳು ಬೆಲೆಯನ್ನು ಹೆಚ್ಚಿಸುತ್ತವೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago