ರಾಜ್ಯ

ಮಹದಾಯಿ ವಿವಾದ : ಕಣಕುಂಬಿಗೆ ಕೇಂದ್ರ ತಂಡ ಭೇಟಿ-ಪರಿಶೀಲನೆ

ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ.

ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯದ ಅಧಿಕಾರಿಗಳು ಒಳಗೊಂಡ ಸದಸ್ಯರ ತಂಡ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿದೆ.

ಕಳಸಾ ಮತ್ತು ಬಂಡೂರಿ ನಾಲೆ ಉಗಮ ಸ್ಥಾನಕ್ಕೆ ಭೇಟಿ ನೀಡಿದ್ದು ಎರಡೂ ನಾಲೆಯ ನೀರಿನ ಹಲವು ಪರಿಶೀಲನೆ ನಡೆಸಲಿದೆ. ಅಲ್ಲದೆ ಮಹದಾಯಿ ಯೋಜನೆಯ ಕಾಮಗಾರಿಯನ್ನು ಸಹ ಪರಿಶೀಲಿಸಲಿದೆ. ಅಲ್ಲದೆ ಹುಲಿ ಸಂರಕ್ಷಿತಾ ಅರಣ್ಯ ನಿಜವಾಗಿಯೂ ಕಳಸಾ ಅಥವಾ ಬಂಡೂರಿ ನಾಲ ಉಗಮ ಸ್ಥಳದಲ್ಲಿದಿಯಾ..? ಕಾಮಗಾರಿ ಮಾಡುವುದರಿಂದ ಪರಿಸರಕ್ಕೆ ದಕ್ಕೆ ಆಗಲಿದೆಯಾ..? ಹಿಂದಿನ ಬಿಜೆಪಿ ಸರ್ಕಾರ ಪರಿಸರ ದೃಷ್ಟಿಯಲ್ಲಿಟ್ಟುಕೊಂಡು ಡಿಪಿಆರ್‌ ಬದಲಾವಣೆ ಮಾಡಿದ್ದು ಅದರಿಂದ ಏನೆಲ್ಲಾ ಆಗಲಿದೆ ಅಂತ ಮಾಹಿತಿ ಸಂಗ್ರಹಿಸಲಿದೆ. ಜೊತೆಗೆ ಎಲ್ಲಾ ವರದಿಯನ್ನ ಪಡೆದುಕೊಂಡು ನಾಳೆ ಬೆಂಗಳೂರಿನಲ್ಲಿ ಸಭೆ ಮಾಡಿ ಚರ್ಚೆ ಮಾಡಲಿದ್ದಾರೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ತಂಡ ವರದಿ ಸಲ್ಲಿಸಲಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

20 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

54 mins ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

1 hour ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

1 hour ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

2 hours ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

2 hours ago