ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ.
ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯದ ಅಧಿಕಾರಿಗಳು ಒಳಗೊಂಡ ಸದಸ್ಯರ ತಂಡ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿದೆ.
ಕಳಸಾ ಮತ್ತು ಬಂಡೂರಿ ನಾಲೆ ಉಗಮ ಸ್ಥಾನಕ್ಕೆ ಭೇಟಿ ನೀಡಿದ್ದು ಎರಡೂ ನಾಲೆಯ ನೀರಿನ ಹಲವು ಪರಿಶೀಲನೆ ನಡೆಸಲಿದೆ. ಅಲ್ಲದೆ ಮಹದಾಯಿ ಯೋಜನೆಯ ಕಾಮಗಾರಿಯನ್ನು ಸಹ ಪರಿಶೀಲಿಸಲಿದೆ. ಅಲ್ಲದೆ ಹುಲಿ ಸಂರಕ್ಷಿತಾ ಅರಣ್ಯ ನಿಜವಾಗಿಯೂ ಕಳಸಾ ಅಥವಾ ಬಂಡೂರಿ ನಾಲ ಉಗಮ ಸ್ಥಳದಲ್ಲಿದಿಯಾ..? ಕಾಮಗಾರಿ ಮಾಡುವುದರಿಂದ ಪರಿಸರಕ್ಕೆ ದಕ್ಕೆ ಆಗಲಿದೆಯಾ..? ಹಿಂದಿನ ಬಿಜೆಪಿ ಸರ್ಕಾರ ಪರಿಸರ ದೃಷ್ಟಿಯಲ್ಲಿಟ್ಟುಕೊಂಡು ಡಿಪಿಆರ್ ಬದಲಾವಣೆ ಮಾಡಿದ್ದು ಅದರಿಂದ ಏನೆಲ್ಲಾ ಆಗಲಿದೆ ಅಂತ ಮಾಹಿತಿ ಸಂಗ್ರಹಿಸಲಿದೆ. ಜೊತೆಗೆ ಎಲ್ಲಾ ವರದಿಯನ್ನ ಪಡೆದುಕೊಂಡು ನಾಳೆ ಬೆಂಗಳೂರಿನಲ್ಲಿ ಸಭೆ ಮಾಡಿ ಚರ್ಚೆ ಮಾಡಲಿದ್ದಾರೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ತಂಡ ವರದಿ ಸಲ್ಲಿಸಲಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…