ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ.
ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯದ ಅಧಿಕಾರಿಗಳು ಒಳಗೊಂಡ ಸದಸ್ಯರ ತಂಡ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಗೆ ಭೇಟಿ ನೀಡಿದೆ.
ಕಳಸಾ ಮತ್ತು ಬಂಡೂರಿ ನಾಲೆ ಉಗಮ ಸ್ಥಾನಕ್ಕೆ ಭೇಟಿ ನೀಡಿದ್ದು ಎರಡೂ ನಾಲೆಯ ನೀರಿನ ಹಲವು ಪರಿಶೀಲನೆ ನಡೆಸಲಿದೆ. ಅಲ್ಲದೆ ಮಹದಾಯಿ ಯೋಜನೆಯ ಕಾಮಗಾರಿಯನ್ನು ಸಹ ಪರಿಶೀಲಿಸಲಿದೆ. ಅಲ್ಲದೆ ಹುಲಿ ಸಂರಕ್ಷಿತಾ ಅರಣ್ಯ ನಿಜವಾಗಿಯೂ ಕಳಸಾ ಅಥವಾ ಬಂಡೂರಿ ನಾಲ ಉಗಮ ಸ್ಥಳದಲ್ಲಿದಿಯಾ..? ಕಾಮಗಾರಿ ಮಾಡುವುದರಿಂದ ಪರಿಸರಕ್ಕೆ ದಕ್ಕೆ ಆಗಲಿದೆಯಾ..? ಹಿಂದಿನ ಬಿಜೆಪಿ ಸರ್ಕಾರ ಪರಿಸರ ದೃಷ್ಟಿಯಲ್ಲಿಟ್ಟುಕೊಂಡು ಡಿಪಿಆರ್ ಬದಲಾವಣೆ ಮಾಡಿದ್ದು ಅದರಿಂದ ಏನೆಲ್ಲಾ ಆಗಲಿದೆ ಅಂತ ಮಾಹಿತಿ ಸಂಗ್ರಹಿಸಲಿದೆ. ಜೊತೆಗೆ ಎಲ್ಲಾ ವರದಿಯನ್ನ ಪಡೆದುಕೊಂಡು ನಾಳೆ ಬೆಂಗಳೂರಿನಲ್ಲಿ ಸಭೆ ಮಾಡಿ ಚರ್ಚೆ ಮಾಡಲಿದ್ದಾರೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ತಂಡ ವರದಿ ಸಲ್ಲಿಸಲಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…