ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ತೀವ್ರ ಮುಖಭಂಗ ಆಗಿದೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ತಮ್ಮ ಎಕ್ಸ್ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಅನುಮತಿಯನ್ನು ಪಡೆಯದೆ ಕರ್ನಾಟಕ ಮಹದಾಯಿ ಕಾಮಗಾರಿಯನ್ನು ಆರಂಭಿಸಿದೆ ಎಂದು ಆರೋಪ ಮಾಡಿದ್ದರು.
ಬಳಿಕ ಗೋವಾ ಸಿಎಂ ಆರೋಪದ ಬೆನ್ನಲ್ಲೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭವೂ ಕೂಡ ಕರ್ನಾಟಕದ ಕೃತ್ಯ ತಂಡದ ಮುಂದೆ ಬಯಲಾಗುತ್ತದೆ ಎಂದು ಪ್ರಮೋದ್ ಸಾವಂತ್ ಹೇಳಿದ್ದರು. ಅಸಲಿಗೆ ಅಲ್ಲಿ ಆದದ್ದು ಬೇರೆ. ಯಾಕೆಂದರೆ ಕಣಕುಂಬಿ ಬಳಿಯ ಜಲಾನಯನ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರದ ತಂಡಕ್ಕೆ ಅಲ್ಲಿ ಯಾವುದೇ ಕಾಮಗಾರಿ ನಡೆಯದೆ ಇರುವುದು ದೃಢವಾಗಿದೆ. ಈ ಮೂಲಕ ಗೋವಾ ಸಿಎಂಗೆ ಮುಖಭಂಗವಾಗಿದೆ.
ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುವುದು ಇದೇ ಮೊದಲೇನು ಅಲ್ಲ ಬಿಡಿ. ಪದೇ ಪದೇ ಒಂದಲ್ಲ ಒಂದು ರೀತಿ ಕ್ಯಾತೆ ತೆಗೆಯುತ್ತಲೆ ಬರುತ್ತಿದೆ. ಮೊದಲಿನಿಂದಲೂ ಕೂಡ ಮಹಾದಾಯಿ ಯೋಜನೆ ಜಾರಿಗೆ ಗೋವ ಸರ್ಕಾರ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದರೂ ಕೂಡ ಯಾವುದು ಜಾರಿಯಾಗುತ್ತಿಲ್ಲ. ಇದಷ್ಟೆ ಅಲ್ಲದೆ ಕೇಂದ್ರ ಅರಣ್ಯ ವನ್ಯಜೀವಿ ಹಾಗೂ ಪರಿಸರ ಇಲಾಖೆಯ ಅನುಮತಿಗೂ ಅಡ್ಡಗಾಲು ಹಾಕುತ್ತಿದ್ದು, ೫ ದಶಕಗಳ ಕಾಲ ಹೋರಾಟ ಮಾಡಿದರೂ ಸಹ ಮಲಪ್ರಭಾ ನದಿ ಪಾತ್ರದ ಜನರಿಗೆ ಒಂದೇ ಒಂದು ಹನಿ ನೀರು ಸಿಗದೆ ಇರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…