ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ತೀವ್ರ ಮುಖಭಂಗ ಆಗಿದೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ತಮ್ಮ ಎಕ್ಸ್ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಅನುಮತಿಯನ್ನು ಪಡೆಯದೆ ಕರ್ನಾಟಕ ಮಹದಾಯಿ ಕಾಮಗಾರಿಯನ್ನು ಆರಂಭಿಸಿದೆ ಎಂದು ಆರೋಪ ಮಾಡಿದ್ದರು.
ಬಳಿಕ ಗೋವಾ ಸಿಎಂ ಆರೋಪದ ಬೆನ್ನಲ್ಲೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭವೂ ಕೂಡ ಕರ್ನಾಟಕದ ಕೃತ್ಯ ತಂಡದ ಮುಂದೆ ಬಯಲಾಗುತ್ತದೆ ಎಂದು ಪ್ರಮೋದ್ ಸಾವಂತ್ ಹೇಳಿದ್ದರು. ಅಸಲಿಗೆ ಅಲ್ಲಿ ಆದದ್ದು ಬೇರೆ. ಯಾಕೆಂದರೆ ಕಣಕುಂಬಿ ಬಳಿಯ ಜಲಾನಯನ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರದ ತಂಡಕ್ಕೆ ಅಲ್ಲಿ ಯಾವುದೇ ಕಾಮಗಾರಿ ನಡೆಯದೆ ಇರುವುದು ದೃಢವಾಗಿದೆ. ಈ ಮೂಲಕ ಗೋವಾ ಸಿಎಂಗೆ ಮುಖಭಂಗವಾಗಿದೆ.
ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುವುದು ಇದೇ ಮೊದಲೇನು ಅಲ್ಲ ಬಿಡಿ. ಪದೇ ಪದೇ ಒಂದಲ್ಲ ಒಂದು ರೀತಿ ಕ್ಯಾತೆ ತೆಗೆಯುತ್ತಲೆ ಬರುತ್ತಿದೆ. ಮೊದಲಿನಿಂದಲೂ ಕೂಡ ಮಹಾದಾಯಿ ಯೋಜನೆ ಜಾರಿಗೆ ಗೋವ ಸರ್ಕಾರ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದರೂ ಕೂಡ ಯಾವುದು ಜಾರಿಯಾಗುತ್ತಿಲ್ಲ. ಇದಷ್ಟೆ ಅಲ್ಲದೆ ಕೇಂದ್ರ ಅರಣ್ಯ ವನ್ಯಜೀವಿ ಹಾಗೂ ಪರಿಸರ ಇಲಾಖೆಯ ಅನುಮತಿಗೂ ಅಡ್ಡಗಾಲು ಹಾಕುತ್ತಿದ್ದು, ೫ ದಶಕಗಳ ಕಾಲ ಹೋರಾಟ ಮಾಡಿದರೂ ಸಹ ಮಲಪ್ರಭಾ ನದಿ ಪಾತ್ರದ ಜನರಿಗೆ ಒಂದೇ ಒಂದು ಹನಿ ನೀರು ಸಿಗದೆ ಇರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…