ರಾಜ್ಯ

ಮಹದಾಯಿ ವಿಚಾರ ; ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ತೀವ್ರ ಮುಖಭಂಗ

ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಗೆ ತೀವ್ರ ಮುಖಭಂಗ ಆಗಿದೆ.

ಗೋವಾ ಸಿಎಂ ಪ್ರಮೋದ್‌ ಸಾವಂತ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಅನುಮತಿಯನ್ನು ಪಡೆಯದೆ ಕರ್ನಾಟಕ ಮಹದಾಯಿ ಕಾಮಗಾರಿಯನ್ನು ಆರಂಭಿಸಿದೆ ಎಂದು ಆರೋಪ ಮಾಡಿದ್ದರು.

ಬಳಿಕ ಗೋವಾ ಸಿಎಂ ಆರೋಪದ ಬೆನ್ನಲ್ಲೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭವೂ ಕೂಡ ಕರ್ನಾಟಕದ ಕೃತ್ಯ ತಂಡದ ಮುಂದೆ ಬಯಲಾಗುತ್ತದೆ ಎಂದು ಪ್ರಮೋದ್‌ ಸಾವಂತ್‌ ಹೇಳಿದ್ದರು. ಅಸಲಿಗೆ ಅಲ್ಲಿ ಆದದ್ದು ಬೇರೆ. ಯಾಕೆಂದರೆ ಕಣಕುಂಬಿ ಬಳಿಯ ಜಲಾನಯನ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರದ ತಂಡಕ್ಕೆ ಅಲ್ಲಿ ಯಾವುದೇ ಕಾಮಗಾರಿ ನಡೆಯದೆ ಇರುವುದು ದೃಢವಾಗಿದೆ. ಈ ಮೂಲಕ ಗೋವಾ ಸಿಎಂಗೆ ಮುಖಭಂಗವಾಗಿದೆ.

ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುವುದು ಇದೇ ಮೊದಲೇನು ಅಲ್ಲ ಬಿಡಿ. ಪದೇ ಪದೇ ಒಂದಲ್ಲ ಒಂದು ರೀತಿ ಕ್ಯಾತೆ ತೆಗೆಯುತ್ತಲೆ ಬರುತ್ತಿದೆ. ಮೊದಲಿನಿಂದಲೂ ಕೂಡ ಮಹಾದಾಯಿ ಯೋಜನೆ ಜಾರಿಗೆ ಗೋವ ಸರ್ಕಾರ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರಿಂ ಕೋರ್ಟ್‌ ತೀರ್ಪು ನೀಡಿದ್ದರೂ ಕೂಡ ಯಾವುದು ಜಾರಿಯಾಗುತ್ತಿಲ್ಲ. ಇದಷ್ಟೆ ಅಲ್ಲದೆ ಕೇಂದ್ರ ಅರಣ್ಯ ವನ್ಯಜೀವಿ ಹಾಗೂ ಪರಿಸರ ಇಲಾಖೆಯ ಅನುಮತಿಗೂ ಅಡ್ಡಗಾಲು ಹಾಕುತ್ತಿದ್ದು, ೫ ದಶಕಗಳ ಕಾಲ ಹೋರಾಟ ಮಾಡಿದರೂ ಸಹ ಮಲಪ್ರಭಾ ನದಿ ಪಾತ್ರದ ಜನರಿಗೆ ಒಂದೇ ಒಂದು ಹನಿ ನೀರು ಸಿಗದೆ ಇರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

9 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

10 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

10 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

10 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

10 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

10 hours ago