ರಾಜ್ಯ

ಮಹದಾಯಿ ವಿಚಾರ ; ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ತೀವ್ರ ಮುಖಭಂಗ

ಬೆಳಗಾವಿ : ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಗೆ ತೀವ್ರ ಮುಖಭಂಗ ಆಗಿದೆ.

ಗೋವಾ ಸಿಎಂ ಪ್ರಮೋದ್‌ ಸಾವಂತ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಮಹದಾಯಿ ಜಲಾನಯನ ಪ್ರದೇಶದಲ್ಲಿ ಯಾವುದೇ ಅನುಮತಿಯನ್ನು ಪಡೆಯದೆ ಕರ್ನಾಟಕ ಮಹದಾಯಿ ಕಾಮಗಾರಿಯನ್ನು ಆರಂಭಿಸಿದೆ ಎಂದು ಆರೋಪ ಮಾಡಿದ್ದರು.

ಬಳಿಕ ಗೋವಾ ಸಿಎಂ ಆರೋಪದ ಬೆನ್ನಲ್ಲೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ಸಮಿತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭವೂ ಕೂಡ ಕರ್ನಾಟಕದ ಕೃತ್ಯ ತಂಡದ ಮುಂದೆ ಬಯಲಾಗುತ್ತದೆ ಎಂದು ಪ್ರಮೋದ್‌ ಸಾವಂತ್‌ ಹೇಳಿದ್ದರು. ಅಸಲಿಗೆ ಅಲ್ಲಿ ಆದದ್ದು ಬೇರೆ. ಯಾಕೆಂದರೆ ಕಣಕುಂಬಿ ಬಳಿಯ ಜಲಾನಯನ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದ ಕೇಂದ್ರದ ತಂಡಕ್ಕೆ ಅಲ್ಲಿ ಯಾವುದೇ ಕಾಮಗಾರಿ ನಡೆಯದೆ ಇರುವುದು ದೃಢವಾಗಿದೆ. ಈ ಮೂಲಕ ಗೋವಾ ಸಿಎಂಗೆ ಮುಖಭಂಗವಾಗಿದೆ.

ಗೋವಾ ಸರ್ಕಾರ ಮಹದಾಯಿ ವಿಚಾರದಲ್ಲಿ ಕ್ಯಾತೆ ತೆಗೆಯುವುದು ಇದೇ ಮೊದಲೇನು ಅಲ್ಲ ಬಿಡಿ. ಪದೇ ಪದೇ ಒಂದಲ್ಲ ಒಂದು ರೀತಿ ಕ್ಯಾತೆ ತೆಗೆಯುತ್ತಲೆ ಬರುತ್ತಿದೆ. ಮೊದಲಿನಿಂದಲೂ ಕೂಡ ಮಹಾದಾಯಿ ಯೋಜನೆ ಜಾರಿಗೆ ಗೋವ ಸರ್ಕಾರ ಅಡ್ಡಗಾಲು ಹಾಕುತ್ತಾ ಬಂದಿದೆ. ಮಹದಾಯಿ ನ್ಯಾಯಧೀಕರಣ, ಸುಪ್ರಿಂ ಕೋರ್ಟ್‌ ತೀರ್ಪು ನೀಡಿದ್ದರೂ ಕೂಡ ಯಾವುದು ಜಾರಿಯಾಗುತ್ತಿಲ್ಲ. ಇದಷ್ಟೆ ಅಲ್ಲದೆ ಕೇಂದ್ರ ಅರಣ್ಯ ವನ್ಯಜೀವಿ ಹಾಗೂ ಪರಿಸರ ಇಲಾಖೆಯ ಅನುಮತಿಗೂ ಅಡ್ಡಗಾಲು ಹಾಕುತ್ತಿದ್ದು, ೫ ದಶಕಗಳ ಕಾಲ ಹೋರಾಟ ಮಾಡಿದರೂ ಸಹ ಮಲಪ್ರಭಾ ನದಿ ಪಾತ್ರದ ಜನರಿಗೆ ಒಂದೇ ಒಂದು ಹನಿ ನೀರು ಸಿಗದೆ ಇರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

8 hours ago