ರಾಜ್ಯ

ಬಸವಣ್ಣನ ಪಠ್ಯ ಮತ್ತೆ ಪರಿಷ್ಕರಣೆ ವಿಚಾರ: ಸಿಎಂಗೆ ಪತ್ರ ಬರೆದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ

ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ.

ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ.

ಪಠ್ಯ ಪರಿಷ್ಕರಣೆ ಮಾಡುವಾಗ ವೀರಶೈವ ಪದವನ್ನು ಕೈಬಿಡಲಾಗಿದೆ. ಇದು ಸರಿಯಲ್ಲ ಎಂದು ವಚನದ ಮೂಲಕ ಸಂಸ್ಥೆ ವಿವರಣೆ ನೀಡಿದೆ. ಬಸವಣ್ಣ ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಪಠ್ಯದ ದೋಷ ಸರಿಪಡಿಸಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಈ ವರ್ಷ ಪರಿಷ್ಕರಣೆಗೊಂಡಿರುವ ಪುಸ್ತಕದಲ್ಲಿ ವೀರಶೈವ ಪದವನ್ನು ತೆಗೆದು ಹಾಕಲಾಗಿದೆ. ಇದು ಸರಿಯಾದ ಪರಿಷ್ಕರಣೆಯಲ್ಲ. ಏಕೆಂದರೆ ಕರ್ನಾಟಕ ಸರ್ಕಾರವು ಪ್ರಸಿದ್ಧ ಸಂಶೋಧಕರಾಗಿದ್ದ ಡಾ.ಎಂ.ಎಂ ಕಲಬುರಗಿಯವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಿಸಿರುವ ಸಮಗ್ರ ವಚನ ಸಂಪುಟಗಳಲ್ಲಿ ಪ್ರಕಟವಾದ ವಚನಗಳನ್ನು ಒಮ್ಮೆ ಕೂಲಂಕುಶವಾಗಿ ಪರಿಶೀಲಿಸಿ ನೋಡಿದಾಗ ಬಸವಣ್ಣನವರಾದಿಯಾಗಿ 30 ಜನ ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದವನ್ನು ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ ಕೇವಲ 12 ಕಡೆ ಮಾತ್ರ ಲಿಂಗಾಯತ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣನವರು ತಮ್ಮ ಒಂದು ವಚನದಲ್ಲಿಯೂ ಲಿಂಗಾಯತ ಪದ ಬಳಸಿಲ್ಲ.

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ಬಸವಣ್ಣನವರು ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಬಸವಣ್ಣನವರು ಇಷ್ಟಲಿಂಗದ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ಪ್ರಕಟಿಸಲಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ಬಸವಣ್ಣನವರು ತಮ್ಮ ವಚನಗಳಲ್ಲಿ ಪ್ರತಿಯೊಬ್ಬರಲ್ಲಿರುವ ಅಂತರಂಗದಲ್ಲಿರುವ ಪರಮಾತ್ಮನ ಅರಿವೇ ಗುರುವಾಗಬೇಕು. ಅರಿವು ಪ್ರತಿಯೊಬ್ಬರ ಬದುಕಿಗೆ ನಿತ್ಯ ದಾರದೀಪವಾಗಬೇಕೆಂದು ಪ್ರತಿಪಾದಿಸಿದ್ದಾರೆಯೇ ಹೊರತು ತಮಗೆ ಗುರುವಿಲ್ಲ ತಮಗೆ ತಮ್ಮ ಅರಿವೇ ಗುರು ಎಂದು ಎಲ್ಲಿಯೂ ಯಾವ ಸಂದರ್ಭದಲ್ಲಿಯೂ ಹೇಳಿಲ್ಲ ಎಂದಿದ್ದಾರೆ.

ಆದ್ದರಿಂದ ಶಿಕ್ಷನ ಇಲಾಖೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಡಾ.ಮಹಾಂತಲಿಂಗ ಶಿಚಾವಾರ್ಯ ಸ್ವಾಮೀಜಿ ಪತ್ರ ಬರೆದು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago