ರಾಜ್ಯ

ಬಸವಣ್ಣನ ಪಠ್ಯ ಮತ್ತೆ ಪರಿಷ್ಕರಣೆ ವಿಚಾರ: ಸಿಎಂಗೆ ಪತ್ರ ಬರೆದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ

ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ.

ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ.

ಪಠ್ಯ ಪರಿಷ್ಕರಣೆ ಮಾಡುವಾಗ ವೀರಶೈವ ಪದವನ್ನು ಕೈಬಿಡಲಾಗಿದೆ. ಇದು ಸರಿಯಲ್ಲ ಎಂದು ವಚನದ ಮೂಲಕ ಸಂಸ್ಥೆ ವಿವರಣೆ ನೀಡಿದೆ. ಬಸವಣ್ಣ ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಪಠ್ಯದ ದೋಷ ಸರಿಪಡಿಸಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಈ ವರ್ಷ ಪರಿಷ್ಕರಣೆಗೊಂಡಿರುವ ಪುಸ್ತಕದಲ್ಲಿ ವೀರಶೈವ ಪದವನ್ನು ತೆಗೆದು ಹಾಕಲಾಗಿದೆ. ಇದು ಸರಿಯಾದ ಪರಿಷ್ಕರಣೆಯಲ್ಲ. ಏಕೆಂದರೆ ಕರ್ನಾಟಕ ಸರ್ಕಾರವು ಪ್ರಸಿದ್ಧ ಸಂಶೋಧಕರಾಗಿದ್ದ ಡಾ.ಎಂ.ಎಂ ಕಲಬುರಗಿಯವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಿಸಿರುವ ಸಮಗ್ರ ವಚನ ಸಂಪುಟಗಳಲ್ಲಿ ಪ್ರಕಟವಾದ ವಚನಗಳನ್ನು ಒಮ್ಮೆ ಕೂಲಂಕುಶವಾಗಿ ಪರಿಶೀಲಿಸಿ ನೋಡಿದಾಗ ಬಸವಣ್ಣನವರಾದಿಯಾಗಿ 30 ಜನ ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದವನ್ನು ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ ಕೇವಲ 12 ಕಡೆ ಮಾತ್ರ ಲಿಂಗಾಯತ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣನವರು ತಮ್ಮ ಒಂದು ವಚನದಲ್ಲಿಯೂ ಲಿಂಗಾಯತ ಪದ ಬಳಸಿಲ್ಲ.

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ಬಸವಣ್ಣನವರು ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಬಸವಣ್ಣನವರು ಇಷ್ಟಲಿಂಗದ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ಪ್ರಕಟಿಸಲಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ಬಸವಣ್ಣನವರು ತಮ್ಮ ವಚನಗಳಲ್ಲಿ ಪ್ರತಿಯೊಬ್ಬರಲ್ಲಿರುವ ಅಂತರಂಗದಲ್ಲಿರುವ ಪರಮಾತ್ಮನ ಅರಿವೇ ಗುರುವಾಗಬೇಕು. ಅರಿವು ಪ್ರತಿಯೊಬ್ಬರ ಬದುಕಿಗೆ ನಿತ್ಯ ದಾರದೀಪವಾಗಬೇಕೆಂದು ಪ್ರತಿಪಾದಿಸಿದ್ದಾರೆಯೇ ಹೊರತು ತಮಗೆ ಗುರುವಿಲ್ಲ ತಮಗೆ ತಮ್ಮ ಅರಿವೇ ಗುರು ಎಂದು ಎಲ್ಲಿಯೂ ಯಾವ ಸಂದರ್ಭದಲ್ಲಿಯೂ ಹೇಳಿಲ್ಲ ಎಂದಿದ್ದಾರೆ.

ಆದ್ದರಿಂದ ಶಿಕ್ಷನ ಇಲಾಖೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಡಾ.ಮಹಾಂತಲಿಂಗ ಶಿಚಾವಾರ್ಯ ಸ್ವಾಮೀಜಿ ಪತ್ರ ಬರೆದು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

7 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

14 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

14 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

19 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

19 hours ago