ರಾಜ್ಯ

ಬಸವಣ್ಣನ ಪಠ್ಯ ಮತ್ತೆ ಪರಿಷ್ಕರಣೆ ವಿಚಾರ: ಸಿಎಂಗೆ ಪತ್ರ ಬರೆದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ

ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ.

ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ.

ಪಠ್ಯ ಪರಿಷ್ಕರಣೆ ಮಾಡುವಾಗ ವೀರಶೈವ ಪದವನ್ನು ಕೈಬಿಡಲಾಗಿದೆ. ಇದು ಸರಿಯಲ್ಲ ಎಂದು ವಚನದ ಮೂಲಕ ಸಂಸ್ಥೆ ವಿವರಣೆ ನೀಡಿದೆ. ಬಸವಣ್ಣ ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಪಠ್ಯದ ದೋಷ ಸರಿಪಡಿಸಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಈ ವರ್ಷ ಪರಿಷ್ಕರಣೆಗೊಂಡಿರುವ ಪುಸ್ತಕದಲ್ಲಿ ವೀರಶೈವ ಪದವನ್ನು ತೆಗೆದು ಹಾಕಲಾಗಿದೆ. ಇದು ಸರಿಯಾದ ಪರಿಷ್ಕರಣೆಯಲ್ಲ. ಏಕೆಂದರೆ ಕರ್ನಾಟಕ ಸರ್ಕಾರವು ಪ್ರಸಿದ್ಧ ಸಂಶೋಧಕರಾಗಿದ್ದ ಡಾ.ಎಂ.ಎಂ ಕಲಬುರಗಿಯವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಿಸಿರುವ ಸಮಗ್ರ ವಚನ ಸಂಪುಟಗಳಲ್ಲಿ ಪ್ರಕಟವಾದ ವಚನಗಳನ್ನು ಒಮ್ಮೆ ಕೂಲಂಕುಶವಾಗಿ ಪರಿಶೀಲಿಸಿ ನೋಡಿದಾಗ ಬಸವಣ್ಣನವರಾದಿಯಾಗಿ 30 ಜನ ಶಿವಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದವನ್ನು ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ ಕೇವಲ 12 ಕಡೆ ಮಾತ್ರ ಲಿಂಗಾಯತ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣನವರು ತಮ್ಮ ಒಂದು ವಚನದಲ್ಲಿಯೂ ಲಿಂಗಾಯತ ಪದ ಬಳಸಿಲ್ಲ.

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ಬಸವಣ್ಣನವರು ಅರಿವನ್ನೇ ಗುರುವಾಗಿಸಿಕೊಂಡಿದ್ದರು. ಬಸವಣ್ಣನವರು ಇಷ್ಟಲಿಂಗದ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ಪ್ರಕಟಿಸಲಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ಬಸವಣ್ಣನವರು ತಮ್ಮ ವಚನಗಳಲ್ಲಿ ಪ್ರತಿಯೊಬ್ಬರಲ್ಲಿರುವ ಅಂತರಂಗದಲ್ಲಿರುವ ಪರಮಾತ್ಮನ ಅರಿವೇ ಗುರುವಾಗಬೇಕು. ಅರಿವು ಪ್ರತಿಯೊಬ್ಬರ ಬದುಕಿಗೆ ನಿತ್ಯ ದಾರದೀಪವಾಗಬೇಕೆಂದು ಪ್ರತಿಪಾದಿಸಿದ್ದಾರೆಯೇ ಹೊರತು ತಮಗೆ ಗುರುವಿಲ್ಲ ತಮಗೆ ತಮ್ಮ ಅರಿವೇ ಗುರು ಎಂದು ಎಲ್ಲಿಯೂ ಯಾವ ಸಂದರ್ಭದಲ್ಲಿಯೂ ಹೇಳಿಲ್ಲ ಎಂದಿದ್ದಾರೆ.

ಆದ್ದರಿಂದ ಶಿಕ್ಷನ ಇಲಾಖೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಡಾ.ಮಹಾಂತಲಿಂಗ ಶಿಚಾವಾರ್ಯ ಸ್ವಾಮೀಜಿ ಪತ್ರ ಬರೆದು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

13 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

3 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

3 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

3 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

3 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

3 hours ago