ರಾಜ್ಯ

ದೇಶೀಯ ಹಸುಗಳಿಗೆ ರಾಜ್ಯಮಾತಾ-ಗೋಮಾತೆ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ದೇಶೀಯ ಹಸುಗಳನ್ನು ರಾಜ್ಯಮಾತಾ-ಗೋಮಾತೆ ಎಂದು ಘೋಷಿಸಿದೆ.

ವೇದಗಳ ಕಾಲದಿಂದಲೂ ದೇಶೀಯ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಈ ಬಗ್ಗೆ ಘೋಷಣೆ ಮಾಡಲಾಗಿದೆ.

ಮಾನವನ ಪೋಷಣೆಯಲ್ಲಿ ದೇಶಿಯ ಹಸುವಿನ ಪ್ರಾಮುಖ್ಯತೆ ಬಹಳ ಮುಖ್ಯವಾಗಿದೆ. ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ, ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಸೇರಿದಂತೆ ಇತರೆ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಹಾರಾಷ್ಟ್ರ ಸಿಎಂ ಕಚೇರಿ ಮಾಹಿತಿ ಪ್ರಕಾರ ರಾಜ್ಯ ಸಚಿವ ಸಂಪುಟವು ದೇಶಿಯ ಹಸುಗಳನ್ನು ಸಾಕಲು ದಿನಕ್ಕೆ 50 ರೂಪಾಯಿ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ.

ಇನ್ನು ದೇಶಿಯ ಹಸುಗಳು ರೈತರಿಗೆ ವರದಾನವಾಗಿರುವ ಹಿನ್ನೆಲೆಯಲ್ಲಿ ಅವುಗಳಿಗೆ ರಾಜ್ಯಮಾತಾ ಸ್ಥಾನಮಾನ ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

44 mins ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

54 mins ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

58 mins ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

1 hour ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

1 hour ago