ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ದೇಶೀಯ ಹಸುಗಳನ್ನು ರಾಜ್ಯಮಾತಾ-ಗೋಮಾತೆ ಎಂದು ಘೋಷಿಸಿದೆ.
ವೇದಗಳ ಕಾಲದಿಂದಲೂ ದೇಶೀಯ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಈ ಬಗ್ಗೆ ಘೋಷಣೆ ಮಾಡಲಾಗಿದೆ.
ಮಾನವನ ಪೋಷಣೆಯಲ್ಲಿ ದೇಶಿಯ ಹಸುವಿನ ಪ್ರಾಮುಖ್ಯತೆ ಬಹಳ ಮುಖ್ಯವಾಗಿದೆ. ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ, ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಸೇರಿದಂತೆ ಇತರೆ ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಹಾರಾಷ್ಟ್ರ ಸಿಎಂ ಕಚೇರಿ ಮಾಹಿತಿ ಪ್ರಕಾರ ರಾಜ್ಯ ಸಚಿವ ಸಂಪುಟವು ದೇಶಿಯ ಹಸುಗಳನ್ನು ಸಾಕಲು ದಿನಕ್ಕೆ 50 ರೂಪಾಯಿ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ.
ಇನ್ನು ದೇಶಿಯ ಹಸುಗಳು ರೈತರಿಗೆ ವರದಾನವಾಗಿರುವ ಹಿನ್ನೆಲೆಯಲ್ಲಿ ಅವುಗಳಿಗೆ ರಾಜ್ಯಮಾತಾ ಸ್ಥಾನಮಾನ ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…