mahesh timarotti
ಮಂಗಳೂರು: ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗರಲಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಎಂಟ್ರಿ ಕೊಟ್ಟಿದ್ದು, ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದರು.
ಕೆಲಕಾಲ ಮಹೇಶ್ ತಿಮರೋಡಿ ಮನೆ ಹೊರಗೆ ಬಾರದೇ ಸತಾಯಿಸಿದರು. ಬಳಿಕ ಪೊಲೀಸರು ಮಹೇಶ್ ತಿಮರೋಡಿಯನ್ನು ಹೊರಗೆ ಬರುವಂತೆ ಸೂಚಿಸಿದ್ದರು. ಕೆಲಕಾಲ ನಿವಾಸದ ಬಳಿ ಹೈಡ್ರಾಮವೇ ನಡೆದು ಹೋಯಿತು.
ಬಳಿಕ ಮನೆಯಿಂದ ಹೊರಬಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದೊಯ್ದರು.
ಈ ವೇಳೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಮಹೇಶ್ ತಿಮರೋಡಿ, ನನಗೆ ಏನಾದರೂ ಹೆಚ್ಚು ಕಡಿಮೆ ಆದರೆ ಪೊಲೀಸರೇ ಕಾರಣ. ಎಸ್ಐಟಿ ತನಿಖೆ ಮುಚ್ಚಿಸಲು ಈ ಕುತಂತ್ರ ನಡೆಯುತ್ತಿದೆ. ನನ್ನನ್ನು ಕೊಲೆ ಮಾಡಬಹುದು ಎಂದು ಕಿಡಿಕಾರಿದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…