ರಾಜ್ಯ

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ರಾಜ್ಯದಲ್ಲಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ ಎಂದು ಪ್ರತಿಪಕ್ಷಗಳು ಪದೇ ಪದೇ ಆರೋಪ ಮಾಡುತ್ತಿವೆ. ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿವೆ.

ಎರಡೂ ಆರೋಪಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆ ನಂತರ ಭದ್ರತಾ ವೈಫಲ್ಯದ ಆರೋಪದ ಮೇರೆಗೆ ಕೆಲವು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ, ಇದೀಗ ದೊಡ್ಡಮಟ್ಟದಲ್ಲಿ ಇಲಾಖೆಗೆ ಸರ್ಜರಿ ಮಾಡಿದೆ.

ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

1 hour ago

ಮುಸ್ಲಿಂ ನಂಬಿಕೆ; ಕಾಂಗ್ರೆಸ್‌ಗೆ ಬೇಕು ಹೊಣೆಗಾರಿಕೆ

ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ

ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…

1 hour ago

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

4 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

4 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

4 hours ago