ರಾಜ್ಯ

ಸಮುದಾಯದಿಂದ ಮತ್ತೊಬ್ಬರನ್ನು ಸಚಿವರನ್ನಾಗಿ ಮಾಡಿ: ಈಡಿಗ ಸಮಾವೇಶದಲ್ಲಿ ಒಕ್ಕೊರಲ ಮನವಿ

ಬೆಂಗಳೂರು: ಈಡಿಗ ಸಮುದಾಯದ ಸ್ವಾಭಿಮಾನಿ ಸಮಾವೇಶದಲ್ಲಿ ಈಡಿಗ ಸಮುದಾಯದವರಿಗೆ ಎರಡು ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ನಗರದಲ್ಲಿ ಇಂದು ನಡೆದ ಈಡಿಗ ಹಾಗೂ ಅದರ ಉಪಪಂಗಡಗಳ ಸ್ವಾಭಿಮಾನಿಸಮಾವೇಶದಲ್ಲಿ ತಮ್ಮ ಸಮುದಾಯದವರಿಗೆ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಸಮುದಾಯದ ನಾಯಕರು ಒತ್ತಾಯ ಮಾಡಿರುವುದಾಗಿ ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಮುದಾಯದ ಶಾಸಕ ಬೇಲೂರು ಗೋಪಾಲಕೃಷ್ಣ, ಆರ್ಯ-ಈಡಿಗ ಅಭಿವೃದ್ಧಿ ನಿಗಮಕ್ಕೆ 500ಕೋಟಿ ರೂ.ಗಳ ಅನುದಾನ ನೀಡಲೇ ಬೇಕು. ಜೊತೆಗೆ ಸಮುದಾಯಕ್ಕೆ 2ಸಚಿವ ಸ್ಥಾನಗಳನ್ನೂ ನೀಡಬೇಕು ಎಂದು ಒತ್ತಾಯ ಮಾಡಿದರು.

ಬಳಿಕ ಮಾತನಾಡಿದ ಶಾಸಕ ಹರತಾಳ್‌ ಹಾಲಪ್ಪ, ಈಗಾಗಲೇ ನಮ್ಮ ಸಮುದಾಯದಿಂದ ಮಧು ಬಂಗಾರಪ್ಪ ಸಚಿವರಾಗಿದ್ದಾರೆ. ಆದರೆ ನಮ್ಮ ಸಮುದಾಯದಿಂದ ಮತ್ತೊಬ್ಬ ಸಚಿವರನ್ನು ಮಾಡಬೇಕು. ರಾಜ್ಯದಲ್ಲಿ ಈಡಿಗರ ಸಂಖ್ಯೆ 50ಲಕ್ಷಕ್ಕಿಂತಲೂ ಹೆಚ್ಚಿದೆ ಎಂದು ಕಾಂತರಾಜ್‌ ಆಯೋಗದ ವರದಿ ತಿಳಿಸಿದೆ. ಹೀಗಾಗಿ ನಮ್ಮ ಸಮುದಾಯದಿಂದ ಮತ್ತೊಬ್ಬರನ್ನು ಸಚಿವರನ್ನಾಗಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾತನಾಡಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸಣ್ಣಪ್ರಮಾಣದ ಹಿಂಡುವಳಿ ಮಾಡುತ್ತಿರುವ ರೈತರಿಗೆ ಜಮೀನುಗಳನ್ನು ಸಕ್ರಮ ಮಾಡಿಕೊಡಬೇಕು. ನಾರಾಯಣ ಗುರುಗಳ ಅಧ್ಯಯನ ಪೀಠಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು ಮತ್ತು ಶಾಲಾ ಪಠ್ಯದಲ್ಲಿ ನಾರಾಯಣ ಗುರುಗಳ ವಿಷಯವನ್ನು ಸೇರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಚಿತ್ರನಟರಾದ ಡಾ.ಶಿವರಾಜ್‌ಕುಮಾರ್‌, ಶ್ರೀಮುರಳಿ, ಸೇರಿದಂತೆ ಅನೇಕ ಗಣ್ಯರು ಹಾಗೂ ಸಮುದಾಯದ ನಾಯಕರು ಭಾಗವಹಿಸಿದ್ದರು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago