ರಾಜ್ಯ

ಡೆಂಗ್ಯೂ ಪರೀಕ್ಷೆಯನ್ನು ಸರ್ಕಾರದಿಂದಲೇ ಮಾಡಿಸಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದೆ. ಝೀಕಾ, ಕಾಲರಾದಿಂದಲೂ ಕನ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ರೋಗ ಹೀಗೆ ಹರಡುವಾಗ ಸರ್ಕಾರ ಪ್ರತಿ ತಾಲೂಕಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು. ಇವ್ಯಾವುದನ್ನೂ ಸರ್ಕಾರ ಮಾಡಿಲ್ಲ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.

ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು. ಅಷ್ಟು ಹಣವನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲವೇ? ಅದಕ್ಕೂ ತೆರಿಗೆ ಹಾಕಬೇಕೆ? ಕೆಲ ಆರೋಗ್ಯ ಕೇಂದ್ರಗಳು 1,000 ರೂ.ವರೆಗೂ ಪರೀಕ್ಷಾ ಶುಲ್ಕ ವಿಧಿಸುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಡೆಂಘೀ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲಿ ಜನರು ಭಯಕ್ಕೊಳಗಾದರೂ ಸರ್ಕಾರಕ್ಕೆ ಇದರ ಭಯ ಬಂದಿಲ್ಲ. 100 ಮಾದರಿ ಪರೀಕ್ಷೆ ಮಾಡಿದರೆ 13-14 ರಲ್ಲಿ ಡೆಂಗ್ಯೂ ಲಕ್ಷಣ ಕಂಡುಬರುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿಗಳಿಗೆ ಡೆಂಗ್ಯೂ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದರು.

ಅತಿ ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಘೀ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರನ್ನು ಬಳಸಿಕೊಂಡು ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಘೀಗೆ ಒಂದು ವಾರ್ಡ್‌ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago