ಬೆಂಗಳೂರು: ಲೊಕಸಭೆ ಚುನಾವಣೆಯಿಂದ ತೆರೆವಾದ ಮೂರು ಕ್ಷೇತ್ರಗಳಗೆ ನವೆಂಬರ್ 13ರಂದು ಮರು ಚುನಾವಣೆ ನಡೆಯಲಿದ್ದು ಈ ಪೈಕಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯು ಬಹಳ ಕುತೂಹಲ ಮೂಡಿಸಿದೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ, ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ರಾಜ್ಯದಲ್ಲಿ ಮೈತ್ರಿ ಪಕ್ಷಗಳನ್ನು ಗಟ್ಟಿಗೊಳಿಸುವುದು ನಮ್ಮ ಕರ್ತವ್ಯ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಬಿಜೆಪಿ ತೊರೆದಿರುವ ವಿಷಯವನ್ನು ಕ್ಷೇತ್ರದ ಜನತೆ ಗಮನಿಸುತ್ತಾರೆ. ಉಪಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ, ಹಾಗೇಯೇ ಇಳಿ ವಯಸ್ಸಿನಲ್ಲಿಯೂ ಮಾಜಿ ಪ್ರಧಾನಿ ದೇವೇಗೌಡರು ಬಂದು ಪ್ರಚಾರ ಮಾಡುತ್ತಾರೆ ಎಂಬ ವಿಷಯ ಕೇಳಿ ಕಾಂಗ್ರೆಸ್ಗೆ ಭಯ ಶುರುವಾಗಿದ್ದು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದರು.
ಸಾಮಾಜಿಕ ನ್ಯಾಯದ ಮುಖ್ಯ ಪರಿಕಲ್ಪನೆಯಾಗಿರುವ ಒಳಮೀಸಲಾತಿ ಜಾರಿ ಬಗ್ಗೆ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರಿಗೆ ಆಸಕ್ತಿ ಇಲ್ಲ, ಈ ವಿಚಾರದಲ್ಲಿ ಕಾಂಗ್ರೆಸ್ನಲ್ಲಿಯೇ ಒಳಜಗಳವಿದೆ, ವಿಷಯ ಮುಚ್ಚಿ ಹಾಕಿ ರಾಜ್ಯದ ಜನರಲ್ಲಿ ಗೊಂದಲ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…