ರಾಜ್ಯ

ಡಿಕೆ ಸುರೇಶ್‌ ʼಪ್ರತ್ಯೇಕ ರಾಷ್ಟ್ರʼ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಸಮರ್ಥನೆ

ʼದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿಲ್ಲವಾದ ಕಾರಣ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮುಂದಿಡಬೇಕಾದ ಅನಿವಾರ್ಯತೆ ಎದುರಾಗಿದೆʼ ಎಂದು ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ ನೀಡಿದ ಹೇಳಿಕೆಯನ್ನು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು ( ಫೆಬ್ರವರಿ 2 ) ಮಾತನಾಡಿದ ಅವರು ʼರಾಜ್ಯಕ್ಕೆ ಅನ್ಯಾಯವಾಗಿದೆ. 28 ಸಂಸದರ ಪೈಕಿ ಅದರ ವಿರುದ್ಧ ದನಿ ಎತ್ತಿರುವ ಏಕೈಕ ಗಂಡು ಅವರು. ಅನ್ಯಾಯ ಆಗಿದ್ದರ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆʼ ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿಯಿಂದ ಹಾಗೂ ನರೇಂದ್ರ ಮೋದಿಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ ನರೇಂದ್ರಸ್ವಾಮಿ ಅದನ್ನು ಪ್ರಶ್ನಿಸಿದ ಏಕೈಕ ಸಂಸದ ಡಿಕೆ ಸುರೇಶ್‌. ಅವರು ಈ ಪ್ರಶ್ನೆಯನ್ನು ಏಕೆ ಎತ್ತಿದ್ದಾರೆ ಎಂಬುದರ ಬಗ್ಗೆ ಚರ್ಚೆಯಾಗಬೇಕು ಎಂದು ಮಾತನಾಡಿದರು.

ಇನ್ನು ಕೆರಗೋಡು ಧ್ವಜ ವಿವಾದದ ಬಗ್ಗೆಯೂ ಸಹ ಮಾತನಾಡಿದ ನರೇಂದ್ರ ಸ್ವಾಮಿ ಈ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತಾತ್ಮಕವಾಗಿಯೂ ಲೋಪವಾಗಿದೆ. ಅದನ್ನು ಕೆಲವರು ಪ್ರಚೋಚಿಸಲು ಬಳಸುತ್ತಿದ್ದಾರೆ. ನಮಗೆ ರಾಷ್ಟ್ರ ಧ್ವಜ ಮುಖ್ಯ. ಕೆರಗೋಡಿನಲ್ಲಿ ಹನುಮ ಧ್ವಜ ಹಾಕಲು ಏಕೆ ಬಿಟ್ಟರು, ಎಲ್ಲಿ ಲೋಪವಾಗಿದೆ ಎಂಬುದರ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದರು. ಅಲ್ಲದೇ ಕೆರಗೋಡಿನಲ್ಲಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಶಾಂತಿ ಸಭೆ ನಡೆಸಬೇಕಿದೆ. ಅದಕ್ಕೆ ಸಮಯ ಕೂಡಿ ಬರಬೇಕು ಎಂದರು.

andolana

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

14 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

20 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

25 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago