ಬೆಂಗಳೂರು: ಕಡಲೆಕಾಯಿ ಜಾತ್ರೆಗೆ ಇಡೀ ಬೆಂಗಳೂರು ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ.
ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಹಮ್ಮಿಕೊಳ್ಳಲಾಗಿದೆ. ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 2 ರಿಂದ 4ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.
ಬಸವನಗುಡಿಯಲ್ಲಿ ಮಾತ್ರವಲ್ಲದೇ ಮಲ್ಲೇಶ್ವರಂನಲ್ಲಿಯೂ ಕಡಲೆಕಾಯಿ ಪರಿಷೆ ನಡೆಯುತ್ತೆ. 800 ಕೆಜಿ ಕಡಲೆ ಕಾಯಿಗಳಿಂದ 20 ಅಡಿ ಅಗಲ ಹಾಗೂ 20 ಅಡಿ ಎತ್ತರದ ಬಸವನ ಮೂರ್ತಿ ನಿರ್ಮಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ. ನಾಳೆ ಬೆಳಗ್ಗೆ 11:30ಕ್ಕೆ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.
ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಣೆ ಮಾಡಲಾಗುತ್ತೆ. ಸರಿ ಸುಮಾರು 8 ಲಕ್ಷ ಜನರು ಪರಿಷೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…