ರಾಜ್ಯ

ಇಂದಿನಿಂದ ಬೆಂಗಳೂರಿನ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ

ಬೆಂಗಳೂರು: ಕಡಲೆಕಾಯಿ ಜಾತ್ರೆಗೆ ಇಡೀ ಬೆಂಗಳೂರು ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ.

ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಹಮ್ಮಿಕೊಳ್ಳಲಾಗಿದೆ. ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 2 ರಿಂದ 4ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.

ಬಸವನಗುಡಿಯಲ್ಲಿ ಮಾತ್ರವಲ್ಲದೇ ಮಲ್ಲೇಶ್ವರಂನಲ್ಲಿಯೂ ಕಡಲೆಕಾಯಿ ಪರಿಷೆ ನಡೆಯುತ್ತೆ. 800 ಕೆಜಿ ಕಡಲೆ ಕಾಯಿಗಳಿಂದ 20 ಅಡಿ ಅಗಲ ಹಾಗೂ 20 ಅಡಿ ಎತ್ತರದ ಬಸವನ ಮೂರ್ತಿ ನಿರ್ಮಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ. ನಾಳೆ ಬೆಳಗ್ಗೆ 11:30ಕ್ಕೆ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.

ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಣೆ ಮಾಡಲಾಗುತ್ತೆ. ಸರಿ ಸುಮಾರು 8 ಲಕ್ಷ ಜನರು ಪರಿಷೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

andolanait

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

51 mins ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

1 hour ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

2 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

2 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago