ಬೆಂಗಳೂರು: ಕಡಲೆಕಾಯಿ ಜಾತ್ರೆಗೆ ಇಡೀ ಬೆಂಗಳೂರು ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ.
ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಹಮ್ಮಿಕೊಳ್ಳಲಾಗಿದೆ. ಕಾರ್ತಿಕ ಮಾಸದ ಶುಭಾ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 2 ರಿಂದ 4ರ ವರಗೆ ಕಡಲೆಕಾಯಿ ಪರಿಷೆ ನಡೆಯಲಿದೆ.
ಬಸವನಗುಡಿಯಲ್ಲಿ ಮಾತ್ರವಲ್ಲದೇ ಮಲ್ಲೇಶ್ವರಂನಲ್ಲಿಯೂ ಕಡಲೆಕಾಯಿ ಪರಿಷೆ ನಡೆಯುತ್ತೆ. 800 ಕೆಜಿ ಕಡಲೆ ಕಾಯಿಗಳಿಂದ 20 ಅಡಿ ಅಗಲ ಹಾಗೂ 20 ಅಡಿ ಎತ್ತರದ ಬಸವನ ಮೂರ್ತಿ ನಿರ್ಮಿಸಲಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ. ನಾಳೆ ಬೆಳಗ್ಗೆ 11:30ಕ್ಕೆ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.
ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳದ ಕಡಲೆಕಾಯಿ ಮತ್ತು ತರಕಾರಿ ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಣೆ ಮಾಡಲಾಗುತ್ತೆ. ಸರಿ ಸುಮಾರು 8 ಲಕ್ಷ ಜನರು ಪರಿಷೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…