ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್ಗೆ ಬಿಗ್ ಶಾಕ್ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ವಿಚಾರ ಸದ್ಯ ಹೈಕಮಾಂಡ್ ಬುಡದಲ್ಲಿದ್ದು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಚಿವರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ ಆಗುತ್ತದೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ…