ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್ಗೆ ಬಿಗ್ ಶಾಕ್ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ವಿಚಾರ ಸದ್ಯ ಹೈಕಮಾಂಡ್ ಬುಡದಲ್ಲಿದ್ದು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಚಿವರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ ಆಗುತ್ತದೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…