ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್ಗೆ ಬಿಗ್ ಶಾಕ್ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ವಿಚಾರ ಸದ್ಯ ಹೈಕಮಾಂಡ್ ಬುಡದಲ್ಲಿದ್ದು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಚಿವರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ ಆಗುತ್ತದೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…