Mysore
21
clear sky

Social Media

ಗುರುವಾರ, 12 ಮಾರ್ಚ್ 2026
Light
Dark

ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದ್ರೆ ತಪ್ಪೇನು?: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ನಿರ್ಣಾಯಕ ಸ್ಥಾನದಲ್ಲಿದ್ದಾರೆ.

ಯಾರು ಸಿಎಂ ಆಗಬೇಕೆಂದು ನಿರ್ಧಾರ ಮಾಡುವುದೇ ಖರ್ಗೆ. ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ. ಖರ್ಗೆ ಅವರು ಎಲ್ಲಾ ಹುದ್ದೆಗಳಿಗೂ ಸಮರ್ಥರು. ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

Tags:
error: Content is protected !!