ರಾಜ್ಯ

ಸಿಎಂ, ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಾಗೂ ಡಿಸಿಎಂ ಬದಲಾವಣೆ ಕುರಿತು ಹೈಕಮಾಂಡ್‌ ನಿರ್ಣಯ ತೆಗೆದುಕೊಳ್ಳುತ್ತದೆ. ಅಲ್ಲದೇ ರಾಹುಲ್‌ ಗಾಂಧಿ ಹಾಗೂ ನಾನು ಎಐಸಿಸಿ ಅಧ್ಯಕ್ಷನಾಗಿ ತೀರ್ಮಾನಿಸುತ್ತೇವೆ. ಅಲ್ಲದೇ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿರುತ್ತದೆ. ಅದನ್ನೇ ನೋಡಿಕೊಂಡು ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿನ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ನಾಯಕರೆಲ್ಲರೂ ಹೇಳಿಕೆಗಳನ್ನೂ ಬಹಿರಂಗವಾಗಿ ನೀಡಬಾರದು. ಎಲ್ಲಾ ಸಚಿವರೂ ಹಾಗೂ ಶಾಸಕರೂ ಪಕ್ಷ ಕೊಟ್ಟಿರುವ ಕೆಲಸವನ್ನು ಮಾತ್ರ ನಿರ್ವಹಿಸಿಕೊಂಡು ಹೋಗಬೇಕು. ಯಾವಾಗ ಏನು ಮಾಡಬೇಕೆಂದನ್ನು ಹೈಕಮಾಂಡ್‌ ನಿರ್ಧಾರಿಸಲಿದೆ. ಹೀಗಾಗೊ ಸುಮ್ಮನೆ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಕೆಲವರು ಹೇಳಿಕೆ ನೀಡಿದಂತೆಲ್ಲಾ ಹೈಕಮಾಂಡ್‌ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

30 mins ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

43 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

54 mins ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

1 hour ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

1 hour ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

1 hour ago