ರಾಜ್ಯ

ಸಿಎಂ, ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಸ್ಥಾನವನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ನಿರ್ಧಾರಿಸುತ್ತದೆ. ಈ ಬಗ್ಗೆ ಯಾವುದೇ ಚರ್ಚೆಗಳು ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಾಗೂ ಡಿಸಿಎಂ ಬದಲಾವಣೆ ಕುರಿತು ಹೈಕಮಾಂಡ್‌ ನಿರ್ಣಯ ತೆಗೆದುಕೊಳ್ಳುತ್ತದೆ. ಅಲ್ಲದೇ ರಾಹುಲ್‌ ಗಾಂಧಿ ಹಾಗೂ ನಾನು ಎಐಸಿಸಿ ಅಧ್ಯಕ್ಷನಾಗಿ ತೀರ್ಮಾನಿಸುತ್ತೇವೆ. ಅಲ್ಲದೇ ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿರುತ್ತದೆ. ಅದನ್ನೇ ನೋಡಿಕೊಂಡು ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿನ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ನಾಯಕರೆಲ್ಲರೂ ಹೇಳಿಕೆಗಳನ್ನೂ ಬಹಿರಂಗವಾಗಿ ನೀಡಬಾರದು. ಎಲ್ಲಾ ಸಚಿವರೂ ಹಾಗೂ ಶಾಸಕರೂ ಪಕ್ಷ ಕೊಟ್ಟಿರುವ ಕೆಲಸವನ್ನು ಮಾತ್ರ ನಿರ್ವಹಿಸಿಕೊಂಡು ಹೋಗಬೇಕು. ಯಾವಾಗ ಏನು ಮಾಡಬೇಕೆಂದನ್ನು ಹೈಕಮಾಂಡ್‌ ನಿರ್ಧಾರಿಸಲಿದೆ. ಹೀಗಾಗೊ ಸುಮ್ಮನೆ ಹೇಳಿಕೆಗಳನ್ನು ನೀಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಕೆಲವರು ಹೇಳಿಕೆ ನೀಡಿದಂತೆಲ್ಲಾ ಹೈಕಮಾಂಡ್‌ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago